ಭಟ್ಕಳ: ಹೆಲ್ಮೆಟ್ ಧರಿಸಿ, ದ್ವಿಚಕ್ರ ವಾಹನ ಚಲಾಯಿಸಿ, ಶ್ರೀ ಗುರು ವಿದ್ಯಾಧಿರಾಜ್ ಕಾಲೇಜಿನ ಪ್ರಾಚಾರ್ಯ ವೀರೇಂದ್ರ ಶಾನಭಾಗ ಕರೆ
ಭಟ್ಕಳ : ಪೊಲೀಸ್ ಇಲಾಖೆಯ ಆಶ್ರಯದಡಿ ನಿರಂತರವಾಗಿ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ದ್ವಿಚಕ್ರ ವಾಹನ ಚಲಾಯಿಸುವ ಸಂದರ್ಭದಲ್ಲಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಮ್ಮ ನಮ್ಮ ಜೀವದ ರಕ್ಷಣೆ ನಮ್ಮ ಕೈಯಲ್ಲಿದೆ. ಈ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಯೆ ವಾಹನವನ್ನು ಚಲಾಯಿಸಬೇಕೆಂದು ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ್ ಕಾಲೇಜಿನ ಪ್ರಾಚಾರ್ಯ ವೀರೇಂದ್ರ ಶಾನಭಾಗ ಅವರು ಕರೆ ನೀಡಿದ್ದಾರೆ. ಅವರು ಇಂದು ಸೋಮವಾರ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ್ ಕಾಲೇಜಿನಲ್ಲಿ ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.