ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೀದಿನಾಯಿಗಳ ಹಾವಳಿ ಕಡಿವಾಣ ಕುರಿತು ಸಭೆ ಹಮ್ಮಿಕೊಳ್ಳಲಾಗಿತ್ತು. ಬುದವಾರ ಮಧ್ಯಾಹ್ನ 1 ಗಂಟೆಗೆ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶಗಳ ಅನುಷ್ಠಾನ ಹಾಗೂ ಜಿಲ್ಲಾ ಪ್ರಾಣಿ ಕಲ್ಯಾಣ ಮಂಡಳಿ ಪ್ರಾಣಿದಾಯಾ ಸಂಘದ ಸಭೆ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ ಅವರು ಮಾತನಾಡಿದ್ದು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಆಶ್ರಯ ತಾಣ ನಿರ್ಮಿಸಲು ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತ್ಯೇಕ ಜಾಗ ಗುರುತಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು