ಜಿಲ್ಲೆಯಲ್ಲಿ ಬಹುತೇಕ ಹಾಸ್ಟೆಲ್ ಗಳಲ್ಲಿ ಸಮರ್ಪಕ ರೀತಿಯಲ್ಲಿ ಮಕ್ಕಳಿಗೆ ಸರ್ಕಾರದಿಂದ ಸಿಗುತ್ತಿರುವ ಆಹಾರ ಸೌಲಭ್ಯಗಳ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಬೇಸರ ವ್ಯಕ್ತ ಪಡಿಸಿದರು. ನಗರದ ಹೊರವಲಯದಲ್ಲಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತದಿಂದ ಜಿಲ್ಲೆಯ ಹಾಸ್ಟೆಲ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ. ಹಾಗಾಗಿ ಉನ್ನತ ಅಧಿಕಾರಿಗಳಿಂದ ಹಿಡಿದು ಹಾಸ್ಟೆಲ್ ಗಳಲ್ಲಿ ಕೆಲಸ ಮಾಡುವವರೆಗೂ ಹಲವು ಲೋಪಗಳು ಕಂಡುಬಂದಿದ್ದು ಈಗಾಗಲೇ ನೋಟಿಸ್ ಗಳನ್ನು ನೀಡಿದ್ದು, ಕೆಲವರನ್ನು ಅಮಾನತ್ತು ಮಾಡಿದ್ದೇವೆ ಎಂದು ಕೃಷ್ಣರವರು ತಿಳಿಸಿದರು.