ಹುಬ್ಬಳ್ಳಿ: ಆಳಂದದಲ್ಲಿ ಬಿಜೆಪಿ ಮಾಜಿ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ದಾಖಲಾಗಿರುವ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (SIT) ಚಾರ್ಜ್ಶೀಟ್ ಸಲ್ಲಿಸಿರುವ ವಿಚಾರಕ್ಕೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಹಲವು ಪ್ರಕರಣಗಳಿವೆ ಎಂದು ಉಲ್ಲೇಖಿಸಿದ ಅವರು, ಚಾರ್ಜ್ಶೀಟ್ ಹಾಕಿದ ತಕ್ಷಣವೇ ಆರೋಪ ಸಾಬೀತಾದಂತೆ ಅಲ್ಲ ಎಂದು ಸ್ಪಷ್ಟಪಡಿಸಿದರು.