ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು. ಕಲಘಟಗಿ ಪಟ್ಟಣದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಮ್ಮ ನಾಯಕರು ಅವರು ಸದಾಕಾಲ ರಾಜಕಾರಣದಲ್ಲಿ ಇರಬೇಕು ಎಂದು ತಿಳಿಸಿದರು.