ದಾಂಡೇಲಿ : ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ತು ಇದರ ಬೆಳಗಾವಿ ವಿಭಾಗೀಯ ಅಧ್ಯಕ್ಷರನ್ನಾಗಿ ದಾಂಡೇಲಿಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ತು ಇದರ ಉ.ಕ ಜಿಲ್ಲಾಧ್ಯಕ್ಷೆ ರೇಣುಕಾ ಬಂದಂ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಬುಧವಾರ ಸಂಜೆ 5.30 ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಇದರ ಬೆಳಗಾವಿ ಸೇರಿದಂತೆ ಒಟ್ಟು 6 ಜಿಲ್ಲೆಗಳ ಉಸ್ತುವಾರಿ ಅಧ್ಯಕ್ಷರನ್ನಾಗಿ ರೇಣುಕಾ ಬಂದಂ ಅವರನ್ನು ತುಮಕೂರಿನಲ್ಲಿ ನಡೆದ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಡಾ.ಜಾನ್ ಖಿಮ್ ರವರು ನೇಮಕ ಮಾಡಿದ್ದಾರೆ.