ರಾಯಚೂರು ತಾಲೂಕಿನ ಗಾಣದಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ 11 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕರಾದ ಮೋಹನ್ ಕುಮಾರ್ ಇವರು 0-18 ವರ್ಷದೊಳಗಿನ ಎಲ್ಲಾ ಮನುಷ್ಯ ಜೀವಿಗಳಿಗೆ ಮಕ್ಕಳು ಎಂದು ಕರೆಯುತ್ತೇವೆ ಎಂದು ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕುರಿತು ವಿವರಿಸಿದ್ದು, ಮಕ್ಕಳು ಬಾಲ್ಯವಿವಾಹಕ್ಕೆ ಬಲಿಯಾಗುವುದು ಅನಿಷ್ಟ ಪದ್ದತಿಯಾಗಿದ್ದು, ಬಾಲ್ಯವಿವಾಹ ಮಾಡುವುದು ಕಂಡು/ ತಿಳಿದು ಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿ ಎಂದು ಹೇಳಿದರು.