ನಗರದ ಸೌಂದರ್ಯವನ್ನು ಕಾಪಾಡುವ ಉದ್ದೇಶದಿಂದ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರ ಆದೇಶದ ಮೇರೆಗೆ, ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರ ಸೂಚನೆಯಂತೆ, ಕೇಂದ್ರ ನಗರ ಪಾಲಿಕೆಯ ವಿವಿಧ ವಿಭಾಗಗಳ ಕಾರ್ಯಪಾಲಕ ಅಭಿಯಂತರರ ನೇತೃತ್ವದಲ್ಲಿ, ಬುಧವಾರ ಸಂಜೆ 4 ಗಂಟೆ ಸುಮಾರಿಗೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾದ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ಸ್ ಗಳ ತೆರವು ಕಾರ್ಯಾಚರಣೆ ನಡೆಸಲಾಯಿತು. ನಗರದ ಪ್ರಮುಖ ಮಾರುಕಟ್ಟೆ ಸ್ಥಳವಾದ ಕೆ.ಆರ್.ಮಾರುಕಟ್ಟೆಯಲ್ಲಿ ಸುಸಜ್ಜಿತವಾಗಿ ಸಾಮೂಹಿಕ ಸ್ವಚ್ಛತಾ ಕಾರ್ಯ ನಿರ್ವಹಿಸಿದ್ದು, ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಈ ಕಾರ್ಯಾಚರಣೆಯ ಅಂಗವಾಗಿ, ಟ್ರ್ಯಾಕ್ಟರ್ ಗಳು, ಜೆಸಿಬಿ, ಆಟೋ ಟಿಪ್ಪರ್ ಗಳು