ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಣ ರಾಜಕಾರಣಿ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆ ಅವರಿಗೆ ಅಷ್ಟೊಂದು ಬೆಂಬಲವಿಲ್ಲ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲು ಡಾ.ಜಿ ಪರಮೇಶ್ವರ್, ಖರ್ಗೆ ಕುಟುಂಬದ ಹೆಸರುಗಳನ್ನು ಮುಂದಿಡುತ್ತದೆ. ಡಿ.ಕೆ. ಶಿವಕುಮಾರ್ ಇದನ್ನು ಸುಲಭವಾಗಿ ಬಿಡುವುದಿಲ್ಲ.