ಬೆಂಗಳೂರು ಉತ್ತರ: ನಗರದಲ್ಲಿ ತಮ್ಮ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಿದ ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಸಡಗರದಿಂದ ಕೂಡಿದ್ದು, ಪ್ರತಿಯೊಬ್ಬರು ತಮ್ಮ ಮನೆಯ ಆಯುಧ, ವಾಹನಗಳಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು ಸದಾಶಿವನಗರದಲ್ಲಿ ಬುಧವಾರ ಮಧ್ಯಾಹ್ನ 12:30 ರ ಸುಮಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಸರ್ಕಾರಿ ವಾಹನಗಳು ಹಾಗೂ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದರು. ನಂತರ ತಮ್ಮ ವಾಹನಗಳಲ್ಲೇ ಸರ್ಕಾರಿ ಕೆಲಸಗಳಿಗೆ ಹೊರಟರು.