ಸಚಿವ ಎಚ್ ಸಿ ಮಹದೇವಪ್ಪ ಅವರು ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಿವಾನಂದ ಸರ್ಕಲ್ ಬಳಿ ಮಾತನಾಡಿ, ಕಬ್ಬು ಬೆಳೆಗಾರರ ಸಮಸ್ಯೆ ಚರ್ಚೆ ಮಾಡಲು ಸಿಎಂ ಜೊತೆಗೆ ದೆಹಲಿಗೆ ಹೋಗ್ತಾ ಇದೇನೆ. ರಾಜ್ಯದ ಸಮಸ್ಯೆಗಳ ಕುರಿತು ಸಂಬಂಧಪಟ್ಟವರ ಜೊತೆ ಚರ್ಚೆ ಮಾಡುತ್ತೇವೆ. ಸಂಪುಟ ವಿಚಾರ ಸೇರಿದಂತೆ ಉಳಿದ ಎಲ್ಲ ವಿಚಾರಗಳು ಸಿಎಂ ಹಾಗೂ ಹೈಕಮಾಂಡ್ ಗೆ ಬಿಟ್ಟಿದ್ದು. ಬಿಹಾರ ಚುನಾವಣೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನ ಸಿಎಂ ಭೇಟಿ ಮಾಡಿಲ್ಲ. ಸಂಪುಟ ಪುನಾರಚನೆ ವಿಚಾರದ ಬಗ್ಗೆ ನಮ್ಮಗೆ ಎನೂ ಗೊತ್ತಿಲ್ಲ ಎಂದರು.