ಯಲ್ಲಾಪುರ :ಗೋ ಸಂರಕ್ಷಣಾ ಕಾನೂನಿಗೆ ತಿದ್ದುಪಡಿ ಮಾಡುವುದರ ವಿರುದ್ಧ ಪ್ರತಿಭಟನೆ,ತಹಸೀಲ್ದಾರ್ ಗೆ ಮನವಿ ಸಲ್ಲಿಕೆ ಯಲ್ಲಾಪುರ :ವಿಶ್ವ ಹಿಂದೂ ಪರಿಷತ್ ತಾಲೂಕು ಘಟಕದಿಂದ ತಾಲೂಕಡಳಿತ ಸೌಧದಲ್ಲಿ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಗೋ ಹತ್ಯೆಯನ್ನು ತಡೆಯಲು ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕಠೋರವಾದ ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ತಂದಿತ್ತು. ಈಗಿನ ಕಾಂಗ್ರೆಸ್ ಸರಕಾರ ಈ ಕಾನೂನನ್ನು ದುರ್ಬಲಗೊಳಿಸಿ, ಗೋ ಹತ್ಯೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿದೆ. ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದಲ್ಲಿ ಈ ಕಾನೂನು ತಿದ್ದುಪಡಿ ಮಾಡಬಾರದು ಎಂದು ಆಗ್ರಹಿಸಿದರು.