ಕಲಬುರಗಿ : ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದ್ದು, ಜನೆವರಿ 5 ರಂದು ರಾತ್ರಿ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಖಚಿತ ಮಾಹಿತಿ ಮೇರೆಗೆ ನಗರದ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಜೂಜುಅಡ್ಡೆ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಜೂಜಾಡುತ್ತಿದ್ದ ನವೀನ್, ಗುರುಶಾಂತ, ಅನೀಲ್, ಪ್ರಸನ್ನ, ಕೃಷ್ಣ, ಖೇಮಲಿಂಗ್ ಸೇರಿದಂತೆ ಆರು ಜನರನ್ನ ಪೊಲೀಸರು ಬಂಧಿಸಿದ್ದಾರೆ.. ಇನ್ನೂ ಬಂಧಿತ ಜೂಜುಕೋರರಿಂದ ₹23,600 ನಗದು ಹಣ ಜಪ್ತಿ ಮಾಡಿಕೊಂಡಿದ್ದಾರೆ.. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ