ರಾಜ್ಯದಲ್ಲಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಮತ್ತು ಶೇ.40 ಇತರೆ ಭಾಷೆ ಇರುವಂತೆ ನಿಯಮ ಜಾರಿಯಲ್ಲಿದೆ. ಇದೇ ನಿಯಮವನ್ನು ಸಾಗರದಲ್ಲಿಯೂ ಪಾಲಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಾಗರ ನಗರದಲ್ಲಿ ಗುರುವಾರ ಸಂಜೆ 4 ಗಂಟೆಗೆ ಬೈಕ್ ಜಾಥಾ ನಡೆಸಿದರು. ನಗರದ ಅಂಗಡಿ ಮುಂಗಟ್ಟುಗಳಲ್ಲಿ 60 : 40 ಅನುಪಾತದಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಹೈಕೋರ್ಟ್ ಆದೇಶವಿದ್ದು, ನಗರಸಭೆಯು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕಾರ್ಯಕರತರು ಮನವಿ ಸಲ್ಲಿಸಿದರು. ಇದಲ್ಲದೆ, ಸ್ಥಳೀಯ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕನ್ನಡದಲ್ಲಿ ಆಡಳಿತ ವ್ಯವಹಾರ ನಡೆಸಬೇಕು ಎಂದರು