ಯಲ್ಲಾಪುರ : ಫೆ 11ರಿಂದ 19 ರವರೆಗೆ ನಡೆಯಲಿರುವ ಗ್ರಾಮದೇವಿ ಜಾತ್ರೆ ಸಂದರ್ಭದಲ್ಲಿ ಮುಖ್ಯವಾಗಿ ಭದ್ರತೆ,ಸುರಕ್ಷತೆ ಮುಖ್ಯ. ಸಾರ್ವಜನಿಕರಿಗೆ ಯಾವದೇ ತೊಂದರೆಯಾಗದಂತೆ,ಸಂಚಾರ, ವಿದ್ಯುತ್, ನೀರು ಹಾಗೂ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಸೋಮವಾರ ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಪಟ್ಟಣ ಪಂಚಾಯತವತಿಯಿಂದ ನಡೆದ ಶ್ರೀ ಗ್ರಾಮದೇವಿ ಜಾತ್ರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ ಪ್ರಮುಖವಾಗಿ ಪಟ್ಟಣದಲ್ಲಿ ಪುಟಪಾತ ಮೇಲಿನ ಗೂಡಂಗಡಿಗಳನ್ನು ತೆರವುಗೊಳಿಸುವಲ್ಲಿ ಯಾವದೇ ರಾಜಕಾರಣ ಮಾಡಬೇಡಿ.ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಕಲ್ಪಿಸಿ ಎಂದು ಸಲಹೆ ಸೂಚನೆ ನೀಡಿದರು.