ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 48 ರ ಚೇತನಾ ಕಾಲನಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಬಯಲು ರಂಗಮಂದಿರ ಕಟ್ಟಡದ ಕಾಮಗಾರಿಗೆ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭೂಮಿಪೂಜೆಯನ್ನು ನೆರವೇರಿಸಿದರು.. ಕಟ್ಟಡದ ಅಡಿಗಲ್ಲು ಸಮಾರಂಭವನ್ನುದ್ದೇಶಿಸಿ ಮಾತನಾಡಿ, ಸಂಸ್ಕೃತಿ ಮತ್ತು ಕಲಾ ಪ್ರದರ್ಶನಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಹಾಗೂ ಜನಪದ ಕಲೆಗಳಿಗೆ ಪ್ರೋತ್ಸಾಹ ನೀಡುವ ರಂಗಮಂದಿರದ ಲಾಭವನ್ನು ಪಡೆಯುವಂತೆ ತಿಳಿಸಿದರು.. ಈ ಸಂದರ್ಭದಲ್ಲಿ ಪ್ರಮುಖರಾದ ರವಿರಾಜ ಕೊಡ್ಲಿ, ವೀರಣ್ಣ ಸವದತ್ತಿ, ವಿಶ್ವನಾಥ ಅಂಗಡಿ, ಭೀಮಸೇನ ಬಡಿಗೇರ, ಚನ್ನಬಸಯ್ಯ ಕಲಾರಿಮಠ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.