ಚಿಕ್ಕಮಗಳೂರು: ನಗರದ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು: ನಗರದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ
26 ಕೋಟಿ ಅನುದಾನದಲ್ಲಿ ನಗರದ ರೈಲು ನಿಲ್ದಾಣವನ್ನು ಮೇಲ್ದರ್ಜೇರಿಸಲಾಗುವುದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಗುರುವಾರ ನಗರದ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ರಾಜ್ಯದ 54 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಚಿಕ್ಕಮಗಳೂರು ನಗರದ ರೈಲು ನಿಲ್ದಾಣವೂ ಸಹ ಇದರಲ್ಲಿ ಸೇರ್ಪಡೆಗೊಂಡಿದೆ ಎಂದರು. ರೈಲು ನಿಲ್ದಾಣವನ್ನು ಆಧುನೀಕರಣಗೊಳಿಸುವ ಜತೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಅವರು, ಡಿ.25ರ ಒಳಗೆ ಕಾಮಗಾರಿ ಮುಕ್ತಾಯಗೊಳಿಸಲಾಗುವುದು ಎಂದರು.