ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಚೇರಿ ಯಲ್ಲಿ ಜುಲೈ 15 ರಂದು ಜನ ಸಂಪರ್ಕ ಸಭೆ, ನಗರದಲ್ಲಿ ಎಇಇ ಮಾಹಿತಿ
ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿಯಲ್ಲಿ ಜುಲೈ 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ ಎಂದು ಮೆಸ್ಕಾಂ ಎಇಇ ಶುಕ್ರವಾರ ಸಂಜೆ 5 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಕುಂದು ಕೊರತೆ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳ ತಿಳಿಸಿದ್ದಾರೆ.