ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಅಂಗೀಕರಿಸಿರುವ ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ಮಸೂದೆ’*ಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) – ಭೀಮವಾದ ಸ್ವಾಗತ ವ್ಯಕ್ತಪಡಿಸಿದೆ ಎಂದು ಸಂಘದ ರಾಜ್ಯ ಸಂಚಾಲಕರಾದ ಡಾ. ಆರ್. ಮೋಹನರಾಜ್ ಹೇಳಿದರು. ರವಿವಾರ 11 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.17ರಷ್ಟು ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಎಂದು ವರ್ಗೀಕರಿಸಿರುವ ಕ್ರಮವು ಸಿ–ಗುಂಪಿನ ಅಲೆಮಾರಿ ಹಾಗೂ ಅತ್ಯಂತ ವಂಚಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದರು.