ಶಿರಹಟ್ಟಿ: ಪಟ್ಟಣದಲ್ಲಿ ಬರಗಾಲದ ನಿಮಿತ್ತ ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಮೇವು ಬ್ಯಾಂಕ್ ಉದ್ಘಾಟಿಸಿದ ತಹಶೀಲ್ದಾರ್
ಬರಗಾಲದ ನಿಮಿತ್ತ ಜಾನುವಾರುಗಳಿಗೆ ಮೇವಿನ ಸಂಗ್ರಹಣೆ ಬಹು ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಬರಗಾಲದ ಟಾಸ್ಕ್ ಫೋರ್ಸ್ ಸಮಿತಿಯ ನೋಡಲ್ ಅಧಿಕಾರಿ ನಿರ್ಮಲಾ ಎನ್.ಕೆ, ಮುಖ್ಯ ಯೋಜನಾಧಿಕಾರಿ ಜಿಲ್ಲಾ ಪಂಚಾಯತ್ ಗದಗ ಇವರ ಅಧ್ಯಕ್ಷತೆಯಲ್ಲಿ ಮೇವು ಬ್ಯಾಂಕ್ ಉದ್ಘಾಟಿಸಲಾಯಿತು. ಬರಗಾಲದ ನಿಮಿತ್ತ ಮೇವು ಬ್ಯಾಂಕ್ ಉದ್ಘಾಟಿಸಿರುವುದಾಗಿ ಮಂಗಳವಾರ ಪಟ್ಟಣದಲ್ಲಿ ತಹಶೀಲ್ದಾರ್ ಅನಿಲ್ ಬಡಿಗೇರಿ ತಿಳಿಸಿದರು.