ಗನ್ ಪೈರ್ ವಿಚಾರ,ಮಂಚೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ ರೈತ ಸಂಘಟನೆಗಳಿಂದ ಪ್ರತಿಭಟನೆ
Manchenahalli, Chikkaballapur | Apr 23, 2025
ಚಿಕ್ಕಬಳ್ಳಾಪುರ ಆ್ಯಂಕರ್:- ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಕ್ವಾರಿ ಮಾಲೀಕ ಹಾಗೂ ರೈತರ ನಡುವೆ ನಡೆದ ಗಲಾಟೆಯಲ್ಲಿ ಮಾಲೀಕ ರೈತನಿಗೆ ಗುಂಡೇಟು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಸಕಲೇಶ್ ಎಂಬುವವರನ್ನು ಪೊಲೀಸರು ಘಟನೆ ನಡೆದ ಕೇವಲ ಮೂರು ಗಂಟೆಗಳ ಅವಧಿಯಲ್ಲಿ ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ಘಟನೆಯ ಬಳಿಕ ಪೊಲೀಸರ ಕಾರ್ಯಕ್ಷಮತೆಯ ಬಗ್ಗೆ ರೈತ ಸಂಘಟನೆಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ರೆ.ಮತ್ತೊಂದು ಕಡೆ ಉದ್ಯಮಿ ಕ್ವಾರಿ ಮಾಲೀಕನ ನಡೆತೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.