ಜಿಬಿಎ ವ್ಯಾಪ್ತಿಯಲ್ಲಿ ಪಾದಚಾರಿ ಹಾಗೂ ಸೈಕ್ಲಿಂಗ್ ಮೂಲಸೌಕರ್ಯವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಭರವಸೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಪಾದಚಾರಿ ನಡಿಗೆ ಹಾಗೂ ಸೈಕ್ಲಿಂಗ್ ಅನ್ನು ಉತ್ತೇಜಿಸುವ ಮೂಲಕ ಬೆಂಗಳೂರಿನ ಪ್ರಮುಖ ಉದ್ಯೋಗ ಕೇಂದ್ರಗಳಲ್ಲಿ ಸ್ಥಿರ (ಸಸ್ಟೈನಬಲ್) ಸಂಚಾರ ಸಂಸ್ಕೃತಿಯನ್ನು ಬಲಪಡಿಸುವ ಉದ್ದೇಶದಿಂದ ಡಬ್ಲ್ಯೂ.ಆರ್.ಐ, ವಾಕಲೂರು ಹಾಗೂ ಅರ್ಬನ್ ಮಾರ್ಫ್ ಸಂಸ್ಥೆಗಳ ನೇತೃತ್ವದಲ್ಲಿ ವಿನೂತನವಾಗಿ ರೂಪಿಸಿರುವ ಹೆಜ್ಜೆ–ಸಂಭ್ರಮ (GALA)” ಉಪಕ್ರಮಕ್ಕೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.