ಬೆಂಗಳೂರು ಉತ್ತರ: ನ.2 ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ: ವಿಜಯೇಂದ್ರ
ನವೆಂಬರ್ 2 ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆಗೆ RSS ಟೀಕೆ ಮಾಡೋ ದುರ್ಬುದ್ಧಿ ಯಾಕೆ ಬಂದಿದೆಯೋ ಗೊತ್ತಿಲ್ಲ. RSS ಟೀಕೆ ಮಾಡ್ತಿರೋದು ಪ್ರಚಾರಕ್ಕೋ ಅಥವಾ ಸಿಎಂ ಕುರ್ಚಿಗೆ ಟವಲ್ ಹಾಕೋಕೆ ಗೊತ್ತಿಲ್ಲ ಎಂದಿದ್ದಾರೆ.