ರಾಜ್ಯ ಸರಕಾರದ ನಿರ್ದೇಶನದಂತೆ ಸೆ. 22ರಿಂದ ಅ. 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿ ಗಣತಿದಾರನಿಗೆ 150 ಮನೆಗಳ ಜವಾಬ್ದಾರಿ ವಹಿಸಲಾಗಿದೆ ಎಂದು ತಹಸೀಲ್ದಾರ್ ಮನೀಷಾ ಎನ್ ಪತ್ರಿ ತಿಳಿಸಿದರು. ಪಟ್ಟಣದ ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಗಣತಿದಾರರಿಗೆ ಶನಿವಾರ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಇದೊಂದು ರಾಜ್ಯ ಸರಕಾರದ ಮಹತ್ವದ ಕಾರ್ಯವಾಗಿದೆ. ಎಲ್ಲ ಗಣತಿದಾರರು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು ಎಂದರು.