ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸರ್ಕಾರವು ಪದವಿ ಪೂರ್ವ ಇಲಾಖೆಗೆ ಧಕ್ಕೆ ಬರುವಂತೆ ಹೊರಡಿಸುತ್ತಿರುವ ಆದೇಶಗಳನ್ನು ತಕ್ಷಣ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಡಾ. ನಾಗರಾಜ್ ಮರೆನ್ನವರ ಪದವಿ ಪೂರ್ವ ಇಲಾಖೆಗೆ ಧಕ್ಕೆ ಬರುವ ಆದೇಶಗಳನ್ನು ಹೊರಡಿಸಲಾಗುತ್ತಿದೆ. ಉಪನ್ಯಾಸಕರ ಕಾರ್ಯವೈಖರಿ ಪರೀಕ್ಷಿಸಲು ಡಯಟ್'ಗಳಿಗೆ ಒಪ್ಪಿಸುತ್ತಿದ್ದಾರೆ. ಎಂದರು