ಶಿವಮೊಗ್ಗ: ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಮೊಬೈಲ್ ಟವರ್ಗಳ ನಿರ್ಮಾಣ ಕಾರ್ಯ, ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ
ಕೇಂದ್ರ ಸರ್ಕಾರವು ನಾಗಾಲೋಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿಗೆ ಪೂರಕವಾಗಿ ಸೌಲಭ್ಯ-ಸಹಕಾರಗಳನ್ನು ಒದಗಿಸುವುದರ ಜೊತೆಗೆ ಎದುರಾಗುವ ಎಲ್ಲಾ ರೀತಿಯ ಸಮಸ್ಯೆ ಸವಾಲುಗಳನ್ನು ಎದುರಿಸಿ ಮುನ್ನುಗ್ಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದ ಬಿ.ಎಸ್.ಎನ್.ಎಲ್.ಭವನದಲ್ಲಿ ದೂರಸಂಚಾರ ಕ್ಷೇತ್ರದಲ್ಲಿ ಆಗಿರುವ ಸಾಧನೆಗಳ ಕುರಿತು ಏರ್ಪಡಿಸಲಾಗಿದ್ದ ದೂರಸಂಪರ್ಕ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಂಗಳವಾರ ಸಂಜೆ 4 ಗಂಟೆಗೆ ಮಾತನಾಡಿ, ಸ್ವಚ್ಚ ಭಾರತದಿಂದ ಇಂದಿನ ಡಿಜಿಟಲ್ಯುಗದವರೆಗೆ ಎಲ್ಲಾ ಕ್ಷೇತ್ರಗಳಲ್ಲೂ ಡಿಜಿಟಲೀಕರಣದ ಕಾರ್ಯ ಭರದಿಂದ ಸಾಗಿದೆ ಎಂದರು