ಕೃಷ್ಣರಾಜನಗರ: ಪಟ್ಟಣದಲ್ಲಿರುವ ವಿಪ ಸದಸ್ಯ ಹೆಚ್.ವಿಶ್ವನಾಥ್ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ, ಚುನಾವಣೆಯಲ್ಲಿ ಸಹಕಾರ ನೀಡಲು ಮನವಿ
ಮಂಡ್ಯ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಯವರು ಕೃಷ್ಣರಾಜನಗರದಲ್ಲಿರುವ ವಿಪ ಸದಸ್ಯ ಹೆಚ್.ವಿಶ್ವನಾಥ್ ಮನೆಗೆ ಭೇಟಿ ನೀಡಿ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಮಾಜಿ ಪ್ರಧಾನಿ ದೇವೇಗೌಡರು ನನಗೆ ಕಷ್ಟಕಾಲದಲ್ಲಿ ಆಗಿದ್ದಾರೆ, ಕುಮಾರಸ್ವಾಮಿ ಒಳ್ಳೆ ವ್ಯಕ್ತಿ, ಮಂಡ್ಯದಲ್ಲಿ ಕುಮಾರಸ್ವಾಮಿ, ಮೈಸೂರಿನಲ್ಲಿ ಯದುವೀರ್ ಗೆಲ್ಲಿಸಲು ಸಹಕಾರ ನೀಡುತ್ತೇನೆ ಎಂದರು. ಈ ವೇಳೆ ಮಾಜಿ ಸಚಿವ ಪುಟ್ಟರಾಜು, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವರು ಇದ್ದರು.