ಈಜೀಪುರ ಮೇಲ್ಸೇತುವೆಗೆ ಅಗತ್ಯವಿರುವ ಜಾಗವನ್ನು ತ್ವರಿತವಾಗಿ ಭೂಸ್ವಾಧಿನಪಡಿಸಿಕೊಳ್ಳಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಈಜೀಪುರ ಮೇಲ್ಸೇತುವೆಗೆ ಸಂಬಂಧಿಸಿದಂತೆ ಬೆಂಗಳೂರು ಘನ ತ್ಯಾಜ್ಯ ನಿಗಮ ನಿಯಮಿತ ಕಛೇರಿಯಲ್ಲಿ ಮಂಗಳವಾರ ಸಂಜೆ 4:40 ರ ಸುಮಾರಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಜೀಪುರ ಮೇಲ್ಸೇತುವೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರಮುಖವಾಗಿ ಸೆಂಟ್ ಜಾನ್ಸ್ ಸಂಸ್ಥೆಗೆ ಸೇರಿದ 2 ಕಡೆ ಜಾಗ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕೇಂದ್ರೀಯ ಸದನ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋ ಫಿಜಿಕ್ಸ್ ಸ್ವತ್ತುಗಳನ್ನು ಭೂಸ್ವಾಧೀನಪಡಿಸಿಕೊಳ್ಳಬೇಕಾಕಿದೆ.