ಕುತಂತ್ರದಿಂದ ಬಿಜೆಪಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ ಎಂದು ಕಾಂಗ್ರೆಸ್ ತಾಲೂಕು ಅಧ್ಯಕ್ಷ ಪಾಮಯ್ಯ ಮುರಾರಿ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡುತ್ತಾ ಅಸಮಾಧಾನ ಹೊರಹಾಕಿದ್ದಾರೆ. ಲಿಂಗಸುಗೂರು ಪಟ್ಟಣದಲ್ಲಿ ಮತಗಳ್ಳರೇ ಕುರ್ಚಿ ಬಿಡಿ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡುತ್ತಾ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕಾಗಿದ್ದ ಚುನಾವಣೆ ಆಯೋಗವು ಅಧಿಕಾರ ಉಳ್ಳವರ ಅಣತೆಯಂತೆ ಕೆಲಸ ಮಾಡಿದೆ, ಹಾಗಾಗಿ ಬಿಜೆಪಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದೆ ಎಂದರು.