ಗದಗ: ಶಾಲೆ ಬಿಟ್ಟ ಮಕ್ಕಳನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಶಾಲೆಗೆ ಸೇರಿಸಿದ ಸಚಿವ ಎಚ್. ಕೆ ಪಾಟೀಲ
Gadag, Gadag | Jun 2, 2025 ಶಿಕ್ಷಣ ಪ್ರತಿಯೊಬ್ಬ ಮಗುವಿಗೂ ಅತ್ಯಂತ ಅವಶ್ಯಕವಾಗಿದೆ. ಸಮಾಜದಲ್ಲಿ ಬದುಕಬೇಕಾದರೆ ಶಿಕ್ಷಣ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಮಕ್ಕಳು ವಿದ್ಯಾವಂತರಾಗಬೇಕು ಎನ್ನುವುದೇ ಸರ್ಕಾರದ ಆಶಯವಾಗಿದೆ. ಆದರೆ, ಹಲವಾರು ಕಾರಣಗಳಿಂದ ಶಾಲೆಗಳಿಂದ ದೂರ ಉಳಿದ ಮಕ್ಕಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲರು ಸ್ವತಃ ತಮ್ಮ ಕಾರಿನಲ್ಲಿ ಏಳು ಮಕ್ಕಳನ್ನು ಪುನಃ ಶಾಲೆಗೆ ಸೇರಿಸಿದ್ದಾರೆ.