ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮತಗಳ್ಳರು ಕುರ್ಚಿ ಬಿಡಿ ಸಹಿ ಸಂಗ್ರಹ ಅಭಿಯಾನವನ್ನು ಮಾಡಲಾಯಿತು. ಅಭಿಯಾನದಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು ಈ ವೇಳೆ ಕಾಂಗ್ರೆಸ್ ಪಕ್ಷ ಮತಗೊಳ್ಳತನ ಅಕ್ರಮವನ್ನು ಬೈಲಿಗೆ ಎಳೆದಿದೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.