ತಮಿಳುನಾಡು ಹಾಗೂ ಕೇರಳದಲ್ಲಿ ಪ್ರವಾಸ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುತ್ತಿರುವ ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯ ಹಾಗು ಕಿರುಕುಳ ನಡೆಯುತ್ತಿದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕೇರಳ ಹಾಗೂ ತಮಿಳುನಾಡು ಗಡಿ ಬಂದ್ ಚಳವಳಿಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹೊನ್ನಹಳ್ಳಿ ಮಂಜೇಶ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಕರ್ನಾಟಕದಿಂದ ಬಹಳಷ್ಟು ಮಂದಿ, ತಮಿಳುನಾಡು ಹಾಗೂ ಕೇರಳ ಪ್ರವಾಸ ಕೈಗೊಂಡಿದ್ದಾರೆ. ತಮಿಳುನಾಡಿನ ಓಂಶಕ್ತಿ ಹಾಗು ಕೇರಳದ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳುವ ಭಕ್ತರು ಹಾಗೂ ಕರ್ನಾಟಕ ನೋಂದಣಿ ಹೊಂದಿರುವ ವಾಹನಗಳ ಮೇಲೆ ದೌರ್ಜನ್ಯಗಳು ನಡೆಯುತ್ತದೆ ಎಂದರು