ಕಾರವಾರ: ನ.14 ರಂದು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಪೋಷಕ-ಶಿಕ್ಷಕರ ಮಹಾಸಭೆ : ನಗರದಲ್ಲಿ ಜಿಪಂ ಸಿಇಒ ಡಾ.ದಿಲೀಷ್ ಶಶಿ ಮಾಹಿತಿ
ನಗರದಲ್ಲಿ ಬುಧವಾರ ಸಂಜೆ 7ಕ್ಕೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಜಿಪಂ ಸಿಇಒ ಡಾ.ದಿಲೀಷ್ ಶಶಿ ಅವರು ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರ್ಕಾರದಿಂದ ಅನುಷ್ಠಾನಿಸಲಾಗಿರುವ ಉಪಕ್ರಮಗಳು, ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸರ್ಕಾರದ ಸುತ್ತೋಲೆಯನ್ವಯ ಪೋಷಕ-ಶಿಕ್ಷಕರ ಮಹಾಸಭೆಯನ್ನು ಏಕಕಾಲಕ್ಕೆ ನಡೆಸಲಾಗುತ್ತಿದೆ ಎಂದಿದ್ದಾರೆ.