ಕಸುವುಗಾನಹಳ್ಳಿಯಲ್ಲಿ ಗುರುವಾರ ತನುಶ್ರೀ (22) ಎಂಬ ಯುವತಿ ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮನೆಯಲ್ಲಿ ಅತ್ತೆ, ಮಾವ ಯಾರೂ ಇಲ್ಲದ ಸಮಯದಲ್ಲಿ ಈ ಕೃತ್ಯ ಎಸಗಿದ್ದಾಳೆ. ಅತ್ತೆ, ಮಾವ ಹಾಗೂ ಗಂಡನ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ. ಈ ಸಂಬಂಧ ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ