ಹಳಿಯಾಳ : ಜನಸ್ನೇಹಿ ಮಾಜಿ ಸೈನಿಕರಾದ ರಾಜು ಮಾರುತಿ ಪೆಜೋಳ್ಳಿ ಅವರ ಆಶ್ರಯದಡಿ ಹಳಿಯಾಳ ಪಟ್ಟಣದ ಧಾರವಾಡ ಮಾರ್ಗದ ವಿಶಾಲ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯು ಸೋಮವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ಅದ್ದೂರಿಯಾಗಿ ಸಂಪನ್ನಗೊಂಡಿತು. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಪಂದ್ಯಾವಳಿಗೆ ಮೆರುಗನ್ನು ತಂದರು. ಪಂದ್ಯಾವಳಿಯನ್ನ ವೀಕ್ಷಣೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಪಂದ್ಯಾವಳಿಗೆ ಪ್ರೋತ್ಸಾಹವನ್ನು ನೀಡಿದರು.