ಎಐಯುಟಿಯುಸಿ ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಸಿದ್ದಾಪುರ ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಮಾವೇಶ ಪಟ್ಟಣದ ಲಯನ್ಸ್ ಬಾಲಭವನ ದಲ್ಲಿ ರವಿವಾರ ಸಂಜೆ 6ರವರೆಗೆ ನಡೆಯಿತು. ಸಭೆಯಲ್ಲಿ ಸಂಘದ ಜಿಲ್ಲಾ ಸಲಹೆಗಾರರಾದ ಗಂಗಾಧರ ಬಡಿಗೇರ ಮಾತನಾಡಿ, ಕಳೆದ ಜನವರಿಯಲ್ಲಿ ರಾಜ್ಯಮಟ್ಟದ ಹೋರಾಟ ಬೆಂಗಳೂರಿನಲ್ಲಿ ನಡೆದಾಗ ಸಿಎಂ ಅವರು, ಏಪ್ರಿಲ್ ನಿಂದ ಪ್ರತಿಯೊಬ್ಬರಿಗೂ ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಮತ್ತು ರಾಜ್ಯದ ಗೌರವಧನಗಳನ್ನು ಕ್ರೋಢೀಕರಿಸಿ ಕನಿಷ್ಠ 10 ಸಾವಿರರೂ. ಗೌರವಧನ ಗ್ಯಾರಂಟಿ ಮಾಡುತ್ತೇವೆ ಎಂದಿದ್ದರು. ಆದರೆ ಭರವಸೆ ಈಡೇರಿಲ್ಲ ಎಂದರು.