ಕುಂದಗೋಳ: ಕಮಡೊಳ್ಳಿ ಗ್ರಾಮದಲ್ಲಿ ಶಿವಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಶಾಸಕ ಎಂ.ಆರ್.ಪಾಟೀಲ್ ಭಾಗಿ
ಕುಂದಗೋಳದ  ಕುಮಡೊಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಭದ್ರಕಾಳಿ  ಶ್ರೀ ವೀರಭದ್ರೇಶ್ವರಸ್ವಾಮಿ, ಶ್ರೀ ಈಶ್ವರ, ಶ್ರೀ ನಂದೀಶ್ವರ ಶಿವಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಜನಜಾಗೃತಿ ಧರ್ಮ ಸಮಾರಂಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಭಾಗವಹಿಸಿ ಪೂಜೆ ಯಲ್ಲಿ ಪಾಲ್ಗೊಂಡು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.. ಈ ಸಂದರ್ಭದಲ್ಲಿ   ಇಂದು  ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಆಶೀರ್ವಾದವನ್ನು ಪಡೆಯಲಾಯಿತು. ಕಾರ್ಯಕ್ರಮದಲ್ಲಿ ನನ್ನೊಂದಿಗೆ ಪಕ್ಷದ ಮುಖಂಡರು ಮತ್ತು ಸ್ಥಳೀಯ ಗುರು ಹಿರಿಯರು ಜೊತೆಗಿದ್ದರು.