ಸಿರಗುಪ್ಪ: ತುಂಗಭದ್ರಾ ರೈತ ಸಂಘದಿಂದ ಬೇಸಿಗೆ ಬೆಳೆಗಳಿಗೆ ನೀರು ಬಿಡುವಂತೆ ಶಾಸಕರಿಗೆ ಮನವಿ
ತುಂಗಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಒದಗಿಸುವಂತೆ ಒತ್ತಾಯಿಸಿ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು, ರೈತರು ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್ ಅವರಿಗೆ ಶನಿವಾರ ಬೆಳಿಗ್ಗೆ 11ಗಂಟೆಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಅಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ‘ಎರಡನೇ ಬೆಳೆಗೆ ನೀರು ಮತ್ತು ಮುಂಬರುವ ದಿನಗಳಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರು ಕುರಿತು ಚರ್ಚಿಸಲು ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು. ತುಂಗಭದ್ರಾ ಬಲದಂಡೆ ಮೇಲ್ಮಟ್ಟ ಮತ್ತು ಕೆಳಮಟ್ಟದ ಕಾಲುವೆ, ಇತರೆ ಕಾಲುವೆಗೂ ಜನವರಿ ಕೊನೆಯವರೆಗೆ ನೀರು ಹರಿಸಿದರೂ ಜಲಾಶಯದಲ್ಲಿ 40 ಟಿಎಂಸಿ ಅಡಿ ನೀರು ಉಳಿಯುತ್ತದೆ. ಅದರಿಂದ ನೂತನ ಗೇಟುಗಳ ಅಳವಡಿಕೆಗೆ ತೊಂದರೆಯಾಗುವು