ಶಿವಮೊಗ್ಗ: ನಾಲೂರು ಕೋಳಿಗೆ ಗ್ರಾಮದ ಕವಲೇಗುಡ್ಡ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ, ಸ್ಥಳಕ್ಕೆ ಎಸ್ಪಿ ಭೇಟಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಕೋಳಿಗೆ ಗ್ರಾಮದ ಕವಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಣೆಯಾಗಿದ್ದ ಯುವತಿ ಶವ ಪತ್ತೆಯಾಗಿದ್ದ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದಾರೆ. ಹೊಸೂರು ಗ್ರಾಮದ ನಿವಾಸಿ ಪೂಜಾ ಎಂಬ ಮಹಿಳೆ ಕಾಣೆಯಾಗಿರುವ ಕುರಿತಾಗಿ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದಾಗ ಆಕೆಯ ಸ್ನೇಹಿತನೇ ಕತ್ತುಹಿಸುಕಿ ನಾಲೂರು ಕೋಳಿಗೆ ಗ್ರಾಮದ ಕವಲೇಗುಡ್ಡ ಅರಣ್ಯ ಪ್ರದೇಶದ ಕಂದಕಕ್ಕೆ ತಳ್ಳಿದ್ದ ಇನ್ನು ಘಟನೆ ನಡೆದಿರುವ ಸ್ಥಳಕ್ಕೆ ಭಾನುವಾರ ಎಸ್ಪಿ ಮಿಥುನ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.