ಪ್ರಶಾಸನ ಗ್ರಾಮಗಳ ಕಡೆಗೆ ಅಭಿಯಾನಕ್ಕೆ ಚಾಲನೆ ಜನಸ್ನೇಹಿ ಆಡಳಿತಕ್ಕೆ ಜಿಲ್ಲಾಧಿಕಾರಿಗಳ ಸೂಚನೆ ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ "ಸುಶಾಸನ ಸಪ್ತಾಹ - ಪ್ರಶಾಸನ ಗ್ರಾಮಗಳ ಕಡೆಗೆ" ಅಭಿಯಾನದ ಅಂಗವಾಗಿ ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮಂಗಳವಾರ ಎಲ್ಲಾ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎಸ್ ಎಂ ಮಂಗಳ ಅವರು ಡಿಸೆಂಬರ್ ೧೯ ರಿಂದ ೨೫ ರವರೆಗೆ ನಡೆಯುತ್ತಿರುವ ಈ ವಿಶೇಷ ಅಭಿಯಾನವು ಗ್ರಾಮೀಣ ಭಾಗದ ಜನರಿಗೆ ಆಡಳಿತವನ್ನು ಹತ್ತಿರವಾಗಿಸುವ ಗುರಿಯನ್ನು ಹೊಂದಿದೆ ಎಂದರು.