ಚಿತ್ರದುರ್ಗ: ಐಮಂಗಲ ಬಳಿ ಲಾರಿ ಮತ್ತು ಬಸ್ ಮಧ್ಯೆ ಅಪಘಾತ, ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನು ವಿಚಾರಿಸಿದ ಸಂಸದ ಗೋವಿಂದ ಕಾರಜೋಳ
ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಸರ್ಕಾರಿ ಬಸ್ ಮತ್ತು ತಮಿಳುನಾಡಿನ ಲಾರಿ ನಡುವೆ ಬೀಕರ ಅಪಘಾತ ನಡೆದು ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ಬೆಳಗಿನ ಜಾವ 2.45 ರ ವೇಳೆ ಹಿರಿಯೂರು ತಾಲ್ಲೂಕಿನ ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಇಪ್ಪತ್ತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನ ಹಿರಿಯೂರು ಹಾಗೂ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ