ಭಟ್ಕಳ:ಹಿರಿಯೂರು ಸಮೀಪ ಸಂಭವಿಸಿದ ಭೀಕರ ಬಸ್ ಮತ್ತು ಲಾರಿ ಅಪಘಾತದ ಅಗ್ನಿ ದುರಂತದಲ್ಲಿ ಅಕಾಲಿಕವಾಗಿ ಮೃತಪಟ್ಟ ಭಟ್ಕಳದ ಪ್ರತಿಭಾನ್ವಿತ ಯುವತಿ ರಶ್ಮಿ ಮಹಾಲೆ ಅವರ ನಿವಾಸಕ್ಕೆ ಮಾನ್ಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರಶ್ಮಿಯ ಅಗಲಿಕೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಪೋಷಕರಿಗೆ ಧೈರ್ಯ ತುಂಬಿದ ಸಂಸದರು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು.