ಮನುವಾದಿ ಬೆಂಬಲಿತ ಷಡ್ಯಂತ್ರದ ಭಾಗವಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ.ಆರ್.ಗವಾಯಿ ಅವರತ್ತ ವಕೀಲರಾದ ಕಿಶೋರ್ ಶೊ ಎಸೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಮಾಡಿದ ಅವಮಾನ, ಎಂದು ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್ ಗಂಭೀರ ಆರೋಪ ಮಾಡಿದರು.ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನನ್ನು ಗಡಿಪಾರು ಮಾಡಿ ದೇಶ ದ್ರೋಹಿ ಪಟ್ಟಿಗೆ ಸೇರಿಸಬೇಕೆಂದು ಶುಕ್ರವಾರ ಆಗ್ರಹಿಸ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು