ಹುಬ್ಬಳ್ಳಿ: ನಗರದಲ್ಲಿ ಹಳೇ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ನಡೆದ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿ, ವೀರಭದ್ರೇಶ್ವರ ದೇವರಿಗೆ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ವಿಶೇಷ ಪೂಜೆ ಸಲ್ಲಿಸಿದರು. ಖ್ಯಾತ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶರವರ ಹಾಸ್ಯ ಸಂಜೆ ವೇದಿಕೆ ಕಾರ್ಯಕ್ರಮದಲ್ಲಿ ಭಗವಹಿಸಲಾಯಿತು. ಈ ಸಂದರ್ಭದಲ್ಲಿ ಖ್ಯಾತ ಉದ್ದಿಮೆದಾರರಾದ ರಮೇಶ ಭಾಪಣ, ಪ್ರಮುಖರಾದ ಎಂ.ಎಂ.ಚರಂತಿಮಠ, ಚಂದ್ರಶೇಖರ ಮಟ್ಟಿ, ಬಸವರಾಜ ಕಲ್ಯಾಣಶೆಟ್ಟರ ಸೇರಿದಂತೆ ಮೊದಲಾದ ಗಣ್ಯರು ಇದ್ದರು.