ದಿ.ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಕೃಷಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ; ಶಾಸಕ ಕೆ ವೈ ನಂಜೇಗೌಡ ಮಾಲೂರು : ದಿ.ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಕೃಷಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿ ಹಸಿರು ಕ್ರಾಂತಿಯನ್ನು ಪ್ರೋತ್ಸಾಹಿಸಿದ್ದಾರೆ ಅವರ ಜನ್ಮದಿನವನ್ನು ಬೇಕಾಬಿಟ್ಟಿ ಮಾಡದೆ ರೈತರ ದಿನವನ್ನಾಗಿ ಅರ್ಥಪೂರ್ಣ ಆಚರಣೆ ಮಾಡುವಂತೆ ಶಾಸಕ ಕೆ ವೈ ನಂಜೇಗೌಡ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ನಗರದ ಕೃಷಿ ಇಲಾಖೆಯ ಆವರಣದಲ್ಲಿ ಕೃಷಿಕ ಸಮಾಜ ಮತ್ತು ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.