ಮಳವಳ್ಳಿ : ಪಟ್ಟಣದಲ್ಲಿ ಡಿ.16 ರಿಂದ ಆರಂಭವಾಗಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ 1066 ನೇ ಜಯಂತಿ ಮಹೋತ್ಸ ವಕ್ಕೆ ಡಿ .17ರಂದು ರಾಷ್ಟ್ರಪತಿ ಗಳು ಆಗಮಿಸುವ ಹಿನ್ನೆಲೆಯಲ್ಲಿ ಸೋಮವಾರ ಸಾಯಂಕಾಲ 6 ಗಂಟೆ ಸಮಯದಲ್ಲಿ ದಕ್ಷಿಣ ವಲಯದ ಐಜಿಪಿ ಬೋರ ಲಿಂಗಯ್ಯ , ಜಿಲ್ಲಾಧಿ ಕಾರಿ ಡಾ. ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಳವಳ್ಳಿ ಪಟ್ಟಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ರಾಷ್ಟ್ರಪತಿಗಳ ಹೆಲಿಕಾಪ್ಟರ್ ನಲ್ಲಿ ಬಂದಿಳಿಯುವ ಹೆಲಿಫ್ಯಾಡ್ ಮತ್ತು ಜಯಂತಿ ಮಹೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.