ಅಂಕೋಲಾ: ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ತೆಂಗಿನ ಮರ ಹತ್ತುತ್ತಿದ್ದ ಕಾರ್ಮಿಕನೊಬ್ಬರು ವಿದ್ಯುತ್ ಶಾಕ್ ಗೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಜು ಗೌಡ ಎಂದು ಗುರುತಿಸಲಾಗಿದೆ. ಕುಟುಂಬದ ಜೀವನ ನಿರ್ವಹಣೆಗೆ ಪರ್ಯಾಯವಾಗಿ ರಾಜು ಗೌಡ ಅವರು ತೆಂಗಿನ ಮರ ಹತ್ತುವ ಕೆಲಸವನ್ನು ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಅವರು ಎಂದಿನಂತೆತೆಂಗಿನ ಮರ ಹತ್ತುವ ವೇಳೆ ಆಕಸ್ಮಿಕ ವಾಗಿ ವಿದ್ಯುತ್ ತಂತಿಗೆ ಸ್ಪರ್ಶವಾಗಿದ್ದು, ವಿದ್ಯುತ್ ಆಘಾತದಿಂದ ಅವರು ಮರದ ಮೇಲೆಯೇ. ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.