ಮದೀನಾ ಬಸ್ ಅಗ್ನಿ ದುರಂತದಲ್ಲಿ ಮೃತಪಟ್ಟ ಹುಬ್ಬಳ್ಳಿಯ ಅಬ್ದುಲ್ ಗನಿ ಶಿರಹಟ್ಟಿ ನಿವಾಸಕ್ಕೆ ಗುರುವಾರ ಸಂಜೆ 5 ಗಂಟೆಗೆ ಭೇಟಿ ನೀಡಿದ ಸಚಿವ ಜಮೀರ್ ಅಹಮದ್ ಖಾನ್ ಹತ್ತು ಲಕ್ಷ ಚೆಕ್ ನೀಡಿದರು. ಇದೇ ಸಂದರ್ಭದಲ್ಲಿ ಅಬ್ದುಲ್ ಗನಿ ಅವರ ಪುತ್ರ ಮೌಲಾ ಎಂಬುವರಿಗೆ ವಸತಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಹುದ್ದೆಯ ನೇಮಕಾತಿ ಪತ್ರ ವಿತರಿಸಿದರು. ಹಜ್ ಕಮಿಟಿ ವತಿಯಿಂದಲೂ ಕುಟುಂಬಕ್ಕೆ ಐದು ಲಕ್ಷ ರೂ. ನೆರವು ಸಿಗಲಿದೆ ಎಂದು ಭರವಸೆ ನೀಡಿದರು.