ಶಿಕಾರಿಪುರ: ಪಟ್ಟಣದ ಸರ್ಕಾರಿ ಐಟಿಐ ಕಾಲೇಜಿನ ಸಭಾಂಗಣದಲ್ಲಿ ಕಸಾಪ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು
ಶಿಕಾರಿಪುರ: ಪಟ್ಟಣದ ಸರ್ಕಾರಿ ಕೈಗಾರಿಕಾ ಸಂಸ್ಥೆ(ಸರ್ಕಾರಿ ಐಟಿಐ) ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಕೈಗಾರಿಕಾ ಸಂಸ್ಥೆ(ಸರ್ಕಾರಿ ಐಟಿಐ) ಕಾಲೇಜು ಆಶ್ರಯದಲ್ಲಿ ನಡೆದ ಚುರ್ಚಿಗುಂಡಿ ಜಿ. ಬಸವನಗೌಡ ದತ್ತಿ ಹಾಗೂ ದಿ.ಅಶೋಕ್ ಎಸ್.ಪಾಟೀಲ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಸಾಪ ಅಧಕ್ಷ ರಘು ಹೆಚ್ ಎಸ್ ಮಾತನಾಡಿ ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಮಾತೃಭಾಷೆ ಕನ್ನಡದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು. ಮಾತೃಭಾಷೆ ಕಲಿತಾಗ ಮಾತ್ರ ನಾವು ಅನ್ಯಭಾಷೆ ಕಲಿಯಲು ಸಾಧ್ಯವಾಗುತ್ತದೆ. ಸಾಹಿತ್ಯ ಓದು ಮನಸ್ಸಿಗೆ ಸಂತೋಷ ಕೊಡುತ್ತದೆ. ನೀವು ಕವಿ,ಲೇಖಕರಾಗುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರೆ ಎಂದರು.