ವಿಜಾಪುರ ಗ್ರಾಮದಲ್ಲಿ ಕಟಾವಿಗೆ ಬಂದಿದ್ದ ಅಡಿಕೆಯನ್ನ ಕಳ್ಳರು ಕದ್ದು ಪರಾರಿಯಾದ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ವಿಜಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದ ಮರಳಸಿದ್ದಪ್ಪ ಎಂಬುವವರ ತೋಟದ ಕಟಾವಿಗೆ ಬಂದಿದ್ದ ಸುಮಾರು 400 ಮರದಲ್ಲಿದ್ದ 35 ರಿಂದ 40 ಕ್ವಿಂಟಾಲ್ ನಷ್ಟು ಅಡಿಕೆಯನ್ನ ಕಳ್ಳರು ಕದ್ದು ಪರಾರಿಯಾಗಿದ್ದು ಬೆಳಗ್ಗೆ ತೋಟಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.